Friday, 03 July 2026
ರಾಜ್ಯ

ಹುಳಿಮಾವು ಕೆರೆ: ಒಳಚರಂಡಿ ಸಂಸ್ಕರಣಾ ಘಟಕ ಶೀಘ್ರ ಪೂರ್ಣ

ಹುಳಿಮಾವು ಕೆರೆಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅರಣ್ಯ ಮತ್ತು ಪರಿಸರ ವಿಭಾಗ ಕೆರೆಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದೆ.

ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳಿಗೆ ಒಳಚರಂಡಿ ಸಂಸ್ಕರಣಾ ಘಟಕದ ನಿರ್ಮಾಣ ಕಾಮಗಾರಿ ತ್ವರಿತಗೊಳಿಸುವಂತೆ ಹಾಗೂ ಕೆರೆಯ ಸುತ್ತ ಬೇಲಿ ಅಳವಡಿಸುವಂತೆ ನಿರ್ದೇಶನ ನೀಡಲಾಗಿದೆ. ಇದರಿಂದ ಒತ್ತುವರಿ ತಡೆಗಟ್ಟಬಹುದು ಹಾಗೂ ಕೆರೆಯ ಸುರಕ್ಷತೆ ಹೆಚ್ಚಿಸಬಹುದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *