ದೆಹಲಿ, ನೋಯ್ಡಾ, ಗುರುಗ್ರಾಮ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳಿಗೆ ಮುಂಗಾರು ಪ್ರವೇಶಿಸುತ್ತಿದ್ದು, ಮಹಾರಾಷ್ಟ್ರ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರಾಖಂಡ ಸೇರಿ 16 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಘೋಷಿಸಿದೆ.
ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಜುಲೈ 5ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ನಾಗರಿಕರು ಅನಗತ್ಯ ಪ್ರಯಾಣ ತಪ್ಪಿಸುವಂತೆ ಹಾಗೂ ಜಲಾವೃತ ಪ್ರದೇಶಗಳಿಂದ ದೂರವಿರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Leave a Reply